Connect with us

LATEST NEWS

ಮಂಗಳೂರು – ಯುವತಿ ವಿಚಾರಕ್ಕೆ ಗಲಾಟೆ – ಯುವಕನಿಗೆ ಚೂರಿ ಇರಿತ

ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ.


ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್ ( 24) ಎಂಬಾನಿಗೆ ಚೂರಿಯಿಂದ ಇರಿಯಲಾಗಿದೆ.ಮಸೀದಿ ಸಮೀಪ‌ ನಿಂತಿದ್ದ ವೇಳೆ ತಂಡ ಚೂರಿಯಿಂದ ಬೆನ್ನಿನ ಭಾಗಕ್ಕೆ ಇರಿದು ಕೊಲೆಗೆ ಯತ್ನಿಸಿದೆ. ನಾಲ್ಕು ಮಂದಿಯ ತಂಡ ದಾಳಿ ನಡೆಸಿರುವುದಾಗಿದೆ, ಮಾಹಿತಿಗಳ ಪ್ರಕಾರ ಎಲ್ಲರೂ ಸ್ನೇಹಿತರಾಗಿದ್ದು, ಒಟ್ಟಿಗೆ ಮಾತನಾಡುತ್ತಿದ್ದ ಸಂದರ್ಭ ಯುವತಿಯ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದು ಚೂರಿಯಿಂದ ಇರಿದಿದ್ದಾರೆ. ದಾಳಿಗೊಳಗಾದವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *