Connect with us

    FILM

    ರೇಣುಕಾ ಸ್ವಾಮಿ ಕೊಲೆ ಪ್ರಕರಣ – ನಟ ದರ್ಶನ ಜೊತೆ ಗೆಳತಿ ಪವಿತ್ರಾ ಗೌಡ ಅರೆಸ್ಟ್

    ಬೆಂಗಳೂರು ಜೂನ್ 11: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್​, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಅರೆಸ್ಟ್ ಮಾಡಲಾಗಿದೆ.


    ಶನಿವಾರ ಸಂಜೆ ಸುಮನಹಳ್ಳಿ ಬ್ರಿಡ್ಜ್ ಬಳಿ ಮೃತದೇಹ ಇದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಅನುಮಾನ ಬಂದ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಶನಿವಾರ ಸಂಜೆ ನಾಲ್ವರು ಬಂದು ಶರಣಾಗಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ 6 ಮಂದಿಯನ್ನು ಬಂಧಿಸಲಾಗಿತ್ತು. ಅವರಲ್ಲಿ ದರ್ಶನ್, ಪವಿತ್ರಾಗೌಡ ಅವರೂ ಸೇರಿದ್ದಾರೆ ಎಂದು ಪೊಲೀಸರು ಹೇಳಿದರು.

    ಅಪೋಲೊ ಫಾರ್ಮೆಸಿಯಲ್ಲಿ ಕೆಲಸ ಮಾಡುತ್ತಿರುವ ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ನಗರಕ್ಕೆ ಕರೆತಂದಿದ್ದ ಆರೋಪಿಗಳು, ಪಟ್ಟಣಗೆರೆ ವಿನಯ್ ಅವರ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ‌ನಡೆಸಿದ್ದರು.‌ ತೀವ್ರ ಹಲ್ಲೆಯಿಂದ ಮೃತಪಟ್ಟ ರೇಣುಕಾಸ್ವಾಮಿ ಅವರ ಮೃತದೇಹವನ್ನು ಬ್ರಿಡ್ಜ್‌ ಬಳಿಗೆ ತಂದು ಎಸೆಯಲಾಗಿತ್ತು. ರೇಣುಕಾಸ್ವಾಮಿಗೆ ಥಳಿಸುವ ಹಾಗೂ ಮೃತದೇಹವನ್ನು ಎಸೆಯುವ ಸಂದರ್ಭದಲ್ಲಿ ದರ್ಶನ್ ಹಾಗೂ ಪವಿತ್ರಾಗೌಡ ಸ್ಥಳದಲ್ಲಿ ‌ಇದ್ದರು. ಇದು ಸಿಸಿ‌ ಟಿವಿಗಳಲ್ಲಿ ಸೆರೆಯಾಗಿದೆ. ಇದನ್ನೇ ಆಧರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply