Connect with us

    BANTWAL

    ಅಪ್ಪ ಮಗನ ಜಗಳ ಕೊಲೆಯಲ್ಲಿ ಅಂತ್ಯ…ಮಗನ ಕೊಂದು ತಾನೂ ನೇಣಿಗೆ ಶರಣಾದ ಅಪ್ಪ

    ಬಂಟ್ವಾಳ ಜೂನ್ 23: ಕ್ಷುಲ್ಲಕ ಕಾರಣಕ್ಕೆ ಅಪ್ಪನೇ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ತಾನು ಸಹ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ.


    ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. ಸಾತ್ವಿಕ್ ( 15) ಕೊಲೆಯಾದ ಬಾಲಕ ನಾಗಿದ್ದಾನೆ.

    ತೀವ್ರ ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಗಲಾಟೆ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದು, ಬಾಬು ನಾಯ್ಕ್ ಅವರ ಪತ್ನಿ ಕ್ಯಾಶ್ಯೂ ಫ್ಯಾಕ್ಟರಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಇಂದು ಮಧ್ಯಾಹ್ನದ ಸಂದರ್ಭ ಅಪ್ಪ ಮಗನ ನಡುವೆ ಮತ್ತೆ ಗಲಾಟೆ ನಡೆದಿದೆ. ಈ ಸಂದರ್ಭ ಬಾಬು ನಾಯ್ಕ್ ಅವರು ಮಗ ಸಾತ್ವಿಕ್​ನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಮನೆಯ ಪಕ್ಕಾಸಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
    ಬಂಟ್ವಾಳ: ಮಗನನ್ನು ಕಡಿದು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾದ ತಂದೆ!

    Share Information
    Advertisement
    Click to comment

    You must be logged in to post a comment Login

    Leave a Reply