Connect with us

DAKSHINA KANNADA

ಕುಡಿದು ರಂಪ ಮಾಡಿದ್ದಕ್ಕೆ ತಂದೆಯನ್ನೇ ಕೊಂದ ಮಕ್ಕಳು !

ಪುತ್ತೂರು, ಜೂನ್ 15: ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದ ತಂದೆಯನ್ನು ಮಕ್ಕಳೇ ಹೊಡೆದು ಸಾಯಿಸಿದ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಡೆದಿದೆ.


ನಿನ್ನೆ ರಾತ್ರಿ ಘಟನೆ ನಡೆದಿದ್ದು ಆರೋಪಿತ ಪುತ್ರರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರಾಯ ಗ್ರಾಮದ ಮುಗ್ಗಗುತ್ತು ನಿವಾಸಿ ಧರ್ಣಪ್ಪ ಪೂಜಾರಿ(69) ಮೃತರು. ಕೃತ್ಯ ಎಸಗಿರುವ ಮಕ್ಕಳಾದ ಮೋನಪ್ಪ ಪೂಜಾರಿ(34) ಮತ್ತು ನವೀನ (28) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕತ್ತಿ ಮತ್ತು ಅಡಿಕೆ ಮರದ ಸಲಾಕೆಯಿಂದ ಹೊಡೆದು ಸಾಯಿಸಿದ್ದು ಮೃತದೇಹ ಬೆಳಗ್ಗಿನ ವರೆಗೂ ಮನೆಯಲ್ಲೇ ಇತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಕೌಟುಂಬಿಕ ಕಲಹದಿಂದ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *