DAKSHINA KANNADA
ಪುತ್ತೂರು – ಆಸ್ತಿ ವಿಚಾರದಲ್ಲಿ ವೈಷಮ್ಯಕ್ಕೆ ವ್ಯಕ್ತಿಯೋರ್ವನ ಕಡಿದು ಕೊಲೆ
ಪುತ್ತೂರು ಜನವರಿ 13: ಆಸ್ತಿ ವಿಚಾರದಲ್ಲಿ ವೈಷಮ್ಯಕ್ಕೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸ್ಯ ಎಂಬಲ್ಲಿ ನಡೆದಿದೆ.
ಮೃತರನ್ನು ರೆಖ್ಯ ದೇವಸ್ಯ ನಿವಾಸಿ ಸಾಂತಪ್ಪ ಗೌಡ (40) ಎಂದು ಗುರುತಿಸಲಾಗಿದೆ. ಜಮೀನು ವಿಚಾರವಾಗಿ ಕೊಲೆ ನಡೆದಿರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪಿಎಸ್ಐ ಕೃಷ್ಣಕಾಂತ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
You must be logged in to post a comment Login