Connect with us

    DAKSHINA KANNADA

    ಪುತ್ತೂರು – ಕುಡಿದ ಮತ್ತಿನಲ್ಲಿ ತಮ್ಮನ ಕೊಲೆಗೈದ ಅಣ್ಣ

    ಪುತ್ತೂರು ಡಿಸೆಂಬರ್ 2 : ಕುಡಿದ ಮತ್ತಿನಲ್ಲಿ ಅಣ್ಣನೊಬ್ಬ ತಮ್ಮನನ್ನು ಕೊಲೆ ಮಾಡಿರುವ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಡಿಸೆಂಬರ್ 1 ರಂದು ರಾತ್ರಿ ನಡೆದಿದೆ.


    ಕೊಲೆಯಾದವನನ್ನು ಮಾದೇವಪ್ಪ ಎಂದು ಗುರುತಿಸಲಾಗಿದ್ದು, ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ನಿಂಗನ ಗೌಡ ಕೊಲೆ ಆರೋಪಿ. ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

    ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply