Connect with us

KARNATAKA

ಮಠಕ್ಕೆ ಮುರುಘಾ ಶ್ರೀಗಳು ವಾಪಸ್ – ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ

ಚಿತ್ರದುರ್ಗ ಅಗಸ್ಟ್ 29: ತಮ್ಮದೇ ಮಠ ನಡೆಸುವ ಹಾಸ್ಟೇಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಇದೀಗ ಮಠಕ್ಕೆ ಆಗಮಿಸಿದ್ದಾರೆ.


ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು, ಆದರೆ ಪೊಲೀಸರು ಮುರುಘಾ ಶ್ರೀಗಳನ್ನು ಮಠಕ್ಕೆ ಭದ್ರತೆಯೊಂದಿಗೆ ಕರೆತಂದಿದ್ದಾರೆ, ಬಳಿಕ ಶ್ರೀಗಳು ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿ, ಬಂದಿರುವ ಸಂದರ್ಭವನ್ನು ಧೈರ್ಯವಾಗಿ ಎದುರಿಸುತ್ತೇನೆ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ ಎಂದು ಮನವಿ ಮಾಡಿಕೊಂಡರು.

ಬುದ್ಧಿವಂತಿಕೆಯಿಂದ ಸಮಸ್ಯೆ ಎದುರಿಸಬೇಕು. ಮಠದ ಭಕ್ತರು ಸಹಕರಿಸಬೇಕು. ಈ ವಿಚಾರದಲ್ಲಿ ಯಾವುದೇ ಪಲಾಯನವಾದವಿಲ್ಲ. ಮಠದ ಒಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ಬಂದಿದೆ. ಈ ನೆಲದ ಕಾನೂನನ್ನು ಗೌರವಿಸಬೇಕು. ಇಂತಹ ಸಂದರ್ಭಗಳು ಇದೇ ಮೊದಲೇನು ಅಲ್ಲ. ಹೀಗಾಗಿ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಶ್ರೀಗಳು ತಿಳಿಸಿದರು.

Share Information
Advertisement
Click to comment

You must be logged in to post a comment Login

Leave a Reply