Connect with us

    LATEST NEWS

    ಉಡುಪಿ – ಮಸೀದಿ ಜಾಗ ಹಿಂಪಡೆದ ಸರಕಾರದ ಕ್ರಮದ ವಿರುದ್ದ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ

    ಉಡುಪಿ ಜೂನ್ 28: ಮಸೀದಿಗೆ ನೀಡಿದ ಜಾಗವನ್ನು ಹಿಂಪಡೆದ ರಾಜ್ಯಸರಕಾರದ ಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿವೆ.

    ಜಸ್ಟಿಸ್ ಫಾರ್ ಕಲ್ಮತ್ ಮಸ್ಜಿದ್ ಫೋರಂ ನ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಸರಕಾರ ತನ್ನ ರಾಜಕೀಯ ಲಾಭಕ್ಕಾಗಿ ಕೊಡವೂರು ಕಲ್ಮತ್ ಮಸೀದಿಗೆ ನೀಡಿದ ಜಾಗವನ್ನು ಕಾನೂನುಬಾಹಿರವಾಗಿ ವಾಪಸು ಪಡೆದಿದ್ದು, ಬಿಜೆಪಿಯಿಂದ ಒಂದು ಸಮುದಾಯವನ್ನು ಮೆಚ್ಚಿಸುವ ಪ್ರಯತ್ನ ಇದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.


    ರಾಜ್ಯ ಸರಕಾರದ ಈ ಕ್ರಮ ಕಾನೂನುಬಾಹಿರವಾಗಿದ್ದು, ಇದರ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪೊಲೀಸ್ ಭದ್ರತೆ ನಡುವೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply