Connect with us

    DAKSHINA KANNADA

    ಹಿಂದುತ್ವಕ್ಕೆ ನನ್ನ ಬದ್ದತೆ ಹಾಗೂ ಅಭಿವೃದ್ಧಿಗೆ ನನ್ನ ಆದ್ಯತೆ : ಬ್ರಿಜೇಶ್ ಚೌಟ

    ಮಂಗಳೂರು : ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಆದ ಬಳಿಕ ಕ್ಯಾಪ್ಚನ್ ಬ್ರಿಜೇಶ್ ಚೌಟ ಅವರು ಸಂಘದ ಕಾರ್ಯಾಲಯ ಸಂಘನಿಕೆತನಕ್ಕೆ ಭೇಟಿ ಮಾಡಿ ಹಿರಿಯರ ಆಶೀರ್ವಾದ ಪಡೆದು ನಂತರ ಕೆ ಪಿ ಟಿ ಬಳಿ ಇರುವ ಯುದ್ಧ ಸ್ಮಾರಕ ಕ್ಕೆ ಭೇಟಿ ನೀಡಿದರು.

    ಬಳಿಕ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತ ರೊಂದಿಗೆ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹಿಂದುತ್ವ ಹಾಗೂ ಅಭಿವೃದ್ಧಿಯೇ ನನ್ನ ಆದ್ಯತೆ. ಈ ಮೂಲಕ ಜಿಲ್ಲೆಯಲ್ಲಿ ಅಭಿವೃದ್ದಿಯ ಹೊಸ ಮಜಲನ್ನು ಸೃಷ್ಟಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂಬ ಭರವಸೆಯನ್ನು ನೀಡುತ್ತೇನೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಅವಕಾಶ ಮಾಡಿಕೊಟ್ಟದ್ದಕ್ಕೆ ಬಿಜೆಪಿ ವರಿಷ್ಠರಿಗೆ ಹಾಗೂ ನನ್ನ ನೆಚ್ಚಿನ ದೇವ ದುರ್ಲಭ ಕಾರ್ಯಕರ್ತರಿಗೆ ಆಭಾರಿ ಆಗಿದ್ದೇನೆ ಎಂದು ಹೇಳಿದರು.
    ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,ಚುನಾವಣಾ ಸಂಚಾಲಕ ನಿತಿನ್ ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಉಪಾಧ್ಯಕ್ಷೆ ಪೂಜಾ ಪೈ, ಶಾಂತಿ ಪ್ರಸಾದ್ ಹೆಗ್ಡೆ,ರವೀಂದ್ರ ಶೆಟ್ಟಿ ಉಳಿದೊಟ್ಟು, ಕೋಶಾಧಿಕಾರಿ ಸಂಜಯ ಪ್ರಭು,ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ,ಮಹೇಶ್ ಜೋಗಿ,ಕಿರಣ್ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply