KARNATAKA
ಮೈಸೂರು: ಹಂದಿ ಜ್ವರಕ್ಕೆ 9 ತಿಂಗಳ ತುಂಬು ಗರ್ಭಿಣಿ ಬಲಿ
ಮೈಸೂರು, ಸೆಪ್ಟೆಂಬರ್ 01 : ಕೊರೊನಾ ಬಳಿಕ ರಾಜ್ಯಕ್ಕೆ ಮತ್ತೊಂದು ಕಂಟಕ ಎದುರಾಗಿದ್ದು, ಮೈಸೂರು ಜಿಲ್ಲೆಯಲ್ಲಿ 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾದ ಘಟನೆ ಬೆಳಕಿಗೆ ಬಂದಿದೆ.
ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಮೃತರು, ಛಾಯಾಗೆ 4 ವರ್ಷದ ಗಂಡು ಮಗು ಇದೆ. 2ನೇ ಮಗುವಿನ ನಿರೀಕ್ಷೆಯಲ್ಲಿ ಕುಟುಂಬವಿತ್ತು.
ಇನ್ನೂ ಕೆಲವೇ ದಿನದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಗೆ ಎಚ್1 ಎನ್1 ಸೋಂಕು ತಗುಲಿತ್ತು. ಛಾಯಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.
You must be logged in to post a comment Login