KARNATAKA
ಮೈಸೂರು – ಖಾಸಗಿ ಬಸ್ ಮತ್ತು ಕಾರು ಡಿಕ್ಕಿ – 10 ಮಂದಿ ಸಾವು….!!
ಮೈಸೂರು ಮೇ 29: ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
You must be logged in to post a comment Login