Connect with us

KARNATAKA

ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಮಗ

ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ. ಕೊಲೆಗಾರ ಸಾಗರ್ ತಲೆಮರೆಸಿಕೊಂಡಿದ್ದಾನೆ.


ಕಳೆದ ಹಲವು ದಿನಗಳಿಂದ ಶಿವಪ್ರಕಾಶ್ ಲತಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇದಕ್ಕೆ ಪುತ್ರನಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ಈ ಸಂಬಂಧ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ನಡುವೆ ಲತಾ ಮನೆಗೆ ನುಗ್ಗಿದ್ದ ಸಾಗರ್ ಮೊದಲು ತಂದೆಯನ್ನು ಕೊಲೆ ಮಾಡಿ ಬಳಿಕ ಲತಾಳನ್ನು ಮಚ್ಚಿನೇಟಿನಿಂದ ಸಾಯಿಸಿದ್ದಾನೆ.


ಈ ನಡುವೆ ಲತಾ ಮೇಲೆ ಹಲ್ಲೆಗೆ ಮುಂದಾದ ವೇಳೆ ಲತಾ ಪುತ್ರ ನಾಗಾರ್ಜುನ ಅಡ್ಡ ಬಂದಿದ್ದು ಅವನಿಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಗರ್ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ನಾಗಾರ್ಜುನನನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಸಾಗರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *