Connect with us

    KARNATAKA

    ಮೈಸೂರು – ಅನ್ಯಜಾತಿ ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆತಾಯಿ

    ಮೈಸೂರು ಜೂನ್ 08: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಅಪ್ರಾಪ್ತ ಮಗಳನ್ನು ತಂದೆ ತಾಯಿ ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

    ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಬಾಲಕಿ. ಈಕೆ ಮೆಲ್ಲಹಳ್ಳಿಯ ಯುವಕ ಮಂಜು ಅನ್ನು ಪ್ರೀತಿಸುತ್ತಿದ್ದಳು. ಶಾಲಿನಿ ಮನೆಯಲ್ಲಿ ಪ್ರೀತಿಗೆ ವಿರೋಧವಿತ್ತು, ಈ ಹಿನ್ನಲೆ ಶಾಲಿನಿ ಮಂಜು ಅನ್ನು ಮದುವೆಯಾಗಲು ಮನೆ ಬಿಟ್ಟಿದ್ದಳು, ಆದರೆ ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಹೀಗಾಗಿ ಶಾಲಿನಿ ಬಾಲಮಂದಿರಕ್ಕೆ ಸೇರಿಕೊಂಡಿದ್ದಳು.

    ಇತ್ತೀಚೆಗಷ್ಟೆ ಮಗಳನ್ನು ಪೋಷಕರಾದ ಸುರೇಶ್ ಹಾಗೂ ಬೇಬಿ ಮನೆಗೆ ಕರೆ ತಂದು ಮಗಳನ್ನು ಕೊಲೆ ಮಾಡಿದ್ದಾರೆ. ಶಾಲಿನಿ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿದೆ. ತಮಗೆ ಅವಮಾನ ಮಾಡಿದಕ್ಕೆ ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply