Connect with us

    KARNATAKA

    ಕಾಡಾನೆ ದಾಳಿಗೆ ಬಲಿಯಾದ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ

    ಹಾಸನ ಡಿಸೆಂಬರ್ 04 : ಕಾಡಾನೆ ಸೆರೆ ಹಿಡಿರುವ ಕಾರ್ಯಾಚರಣೆ ವೇಳೆ 9 ಬಾರಿ ಚಾಮುಂಡೇಶ್ವರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯನ್ನು ಒಂಟಿ ಸಲಗ ಬಲಿ ಪಡೆದಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಈ ಘಟನೆ ನಡೆದಿದೆ.


    ಸೋಮವಾರ ಮಧ್ಯಾಹ್ನ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಅರಿವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಪುಂಡಾನೆಯೊಂದು ದಾಳಿ ಮಾಡಿದೆ. ನಾಲ್ಕು ಸಾಕಾನೆಗಳ ಜೊತೆಗೆ ಅದನ್ನು ಹಿಮ್ಮೆಟ್ಟಿಸಲು ಮಾವುತರು ಪ್ರಯತ್ನಿಸಿದರು.

    ಮೂರು ಆನೆಗಳು ಹಿಂದೆ ಸರಿದಿದ್ದು, ಸಾಕಾನೆ ಅರ್ಜುನನ ಮೇಲೆ ಕಾಡಾನೆ ದಾಳಿ ನಡೆಸಿದೆ. ದಾಳಿ ತೀವ್ರವಾಗುತ್ತಿದ್ದಂತೆಯೇ ಅರ್ಜುನನ ಮಾವುತರು ಕೇಳಕ್ಕೆ ಇಳಿದು ಓಡಿ ಬಂದಿದ್ದಾರೆ. ಹೊಟ್ಟೆ ಭಾಗಕ್ಕೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಾಕಾನೆ ಅರ್ಜುನ ಮೃತಪಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply