Connect with us

    FILM

    ಮೈಸೂರು : ‘ರಾಖಿ ಸಾವಂತ್​ ಬಯೋಪಿಕ್’​ ಗೆ ಕಾಂತಾರದ ರಿಷಬ್​ ಶೆಟ್ಟಿ ಆ್ಯಕ್ಷನ್ -ಕಟ್..!!?

    ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ  ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ರಾಖಿ ಸಾವಂತ್ ಹೇಳಿದ್ದಾರೆ.

    ಮೈಸೂರು : ರಾಖಿ ಸಾವಂತ್​ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್ ಆಗ್ತಿದೆ. ಸಿನೆಮಾಕ್ಕೆ ಹಣ ಸುರಿಯಲು ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ.

    ವಿದ್ಯಾ ಬಾಲನ್​ ತನ್ನ ಪಾತ್ರ ಮಾಡಿದರೆ ಉತ್ತಮ ಮತ್ತು ರಿಷಬ್ ಶೆಟ್ಟಿಯೇ ನಿರ್ದೇಶನ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    ವಿವಾದಗಳಿಂದಲೇ ಹೆಚ್ಚು ಪ್ರಚಾರ ಪಡೆದಿದ್ದ ರಾಖೀ ಸಾವಂತ್ ಪ್ರತಿ ದಿನವೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ರಾಖಿ ಸಾವಂತ್​ ಅವರ ವೈಯಕ್ತಿಕ ಜೀವನದ ವಿಚಾರಗಳು ಬೀದಿಗೆ ಬಂದಿವೆ.

    ಪತಿ ಆದಿಲ್​ ಖಾನ್​ ಜೊತೆ ಅವರು ಕಿರಿಕ್​ ಮಾಡಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಈಗ ಅವರು ತಮ್ಮ ಬಯೋಪಿಕ್ ಮಾಡುವ ಬಗ್ಗೆ ಒಂದು ಆಸೆ ವ್ಯಕ್ತಪಡಿಸಿದ್ದಾರೆ.

    ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ  ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ರಾಖಿ ಸಾವಂತ್ ಹೇಳಿದ್ದಾರೆ.

    ಇದಕ್ಕೆ ರಿಷಬ್​ ಶೆಟ್ಟಿ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

    ಚಿತ್ರಕಥೆ, ಸಂಗೀತ, ನಿರ್ದೇಶನ ಎಲ್ಲ ವಿಭಾಗದಲ್ಲೂ ದೊಡ್ಡ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ.

    ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್​ ಶೆಟ್ಟಿ ಹೆಚ್ಚು ಇಷ್ಟ’ ಎಂದು ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ರಾಖಿ ವಿಚಾರ ಹೇಳಿದ್ದಾರೆ.

    ಸದ್ಯ ರಿಷಬ್​ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply