FILM
ಮೈಸೂರು : ‘ರಾಖಿ ಸಾವಂತ್ ಬಯೋಪಿಕ್’ ಗೆ ಕಾಂತಾರದ ರಿಷಬ್ ಶೆಟ್ಟಿ ಆ್ಯಕ್ಷನ್ -ಕಟ್..!!?
ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ ಸಿನಿಮಾಗೆ ರಿಷಬ್ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ರಾಖಿ ಸಾವಂತ್ ಹೇಳಿದ್ದಾರೆ.
ಮೈಸೂರು : ರಾಖಿ ಸಾವಂತ್ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್ ಆಗ್ತಿದೆ. ಸಿನೆಮಾಕ್ಕೆ ಹಣ ಸುರಿಯಲು ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ.
ವಿದ್ಯಾ ಬಾಲನ್ ತನ್ನ ಪಾತ್ರ ಮಾಡಿದರೆ ಉತ್ತಮ ಮತ್ತು ರಿಷಬ್ ಶೆಟ್ಟಿಯೇ ನಿರ್ದೇಶನ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿವಾದಗಳಿಂದಲೇ ಹೆಚ್ಚು ಪ್ರಚಾರ ಪಡೆದಿದ್ದ ರಾಖೀ ಸಾವಂತ್ ಪ್ರತಿ ದಿನವೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ರಾಖಿ ಸಾವಂತ್ ಅವರ ವೈಯಕ್ತಿಕ ಜೀವನದ ವಿಚಾರಗಳು ಬೀದಿಗೆ ಬಂದಿವೆ.
ಪತಿ ಆದಿಲ್ ಖಾನ್ ಜೊತೆ ಅವರು ಕಿರಿಕ್ ಮಾಡಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಈಗ ಅವರು ತಮ್ಮ ಬಯೋಪಿಕ್ ಮಾಡುವ ಬಗ್ಗೆ ಒಂದು ಆಸೆ ವ್ಯಕ್ತಪಡಿಸಿದ್ದಾರೆ.
ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ ಸಿನಿಮಾಗೆ ರಿಷಬ್ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ರಾಖಿ ಸಾವಂತ್ ಹೇಳಿದ್ದಾರೆ.
ಇದಕ್ಕೆ ರಿಷಬ್ ಶೆಟ್ಟಿ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.
ಚಿತ್ರಕಥೆ, ಸಂಗೀತ, ನಿರ್ದೇಶನ ಎಲ್ಲ ವಿಭಾಗದಲ್ಲೂ ದೊಡ್ಡ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ.
ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಹೆಚ್ಚು ಇಷ್ಟ’ ಎಂದು ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ರಾಖಿ ವಿಚಾರ ಹೇಳಿದ್ದಾರೆ.
ಸದ್ಯ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.
You must be logged in to post a comment Login