Connect with us

    FILM

    ನಾಗದರ್ಶನ ವೇಳೆ ನಟಿ ಜ್ಯೋತಿ ಮೇಲೆ ದೇವರ ಆವಾಹನೆ

    ಬೆಂಗಳೂರು ಅಗಸ್ಟ್ 14 : ಬೆಂಗಳೂರಿನಲ್ಲಿ ಸಿನೆಮಾ ಕಲಾವಿದರ ಸಂಘದಲ್ಲಿ ಇಂದು ಚಿತ್ರರಂಗದ ಒಳಿತಿಗಾಗಿ ಹೋಮ ಹವನ ಮಾಡಲಾಗಿದೆ. ಈ ವೇಳೆ ನಾಗದೇವರ ವಿಶೇಷ ಪೂಜೆ ಮಾಡಲಾಗಿದ್ದು, ನಾಗದರ್ಶನ ವೇಳೆ ನಟಿ ಜ್ಯೋತಿ ಅವರ ಮೈಮೇಲೆ ಆವೇಶ ಬಂದ ಘಟನೆ ನಡೆದಿದೆ.


    ನಟ ದರ್ಶನ ಅರೆಸ್ಟ್ ಆದ ಬಳಿಕ ಕನ್ನಡ ಚಿತ್ರರಂಗದಲ್ಲಿ ಸಮಸ್ಯೆಗಳು ತಲೆತೋರಿದ್ದು, ಈ ಹಿನ್ನಲೆ ಕನ್ನಡ ಚಿತ್ರರಂಗದ ಒಳಿತಿಗಾಗಿ ಹೋಮ-ಹವನ ಮಾಡಲಾಗಿದೆ. ಸ್ಯಾಂಡಲ್‌ವುಡ್‌ನ ಅಭಿವೃದ್ಧಿ, ಶಾಂತಿ, ನೆಮ್ಮದಿಗಾಗಿ ಗಣ ಹೋಮ, ಆಶ್ಲೇಷಾ ಬಲಿ, ಮೃತ್ಯುಂಜಯ ಹೋಮ, ಸರ್ಪಶಾಂತಿ, ನಾಗದೇವರ ವಿಶೇಷ ಪೂಜೆಯನ್ನು ನೆರವೇರಿಸಲಾಗಿದೆ. ಕಲಾವಿದರ ಸಂಘದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ನಾಗದರ್ಶನವಾಗಿದ್ದು, ಈ ನಾಗದರ್ಶನದ ವೇಳೆ ಹಿರಿಯ ನಟಿ ಜ್ಯೋತಿ ಅವರ ಮೈ ಮೇಲೆ ದೇವರು ಬಂದ ಘಟನೆಯೂ ನಡೆದಿದೆ. ಕೂಡಲೇ ಇತರೆ ಕಲಾವಿದರು ನಟಿ ಜ್ಯೋತಿ ಅವರನ್ನು ಹಿಡಿದುಕೊಂಡಿದ್ದಾರೆ.
    ಕೂಡಲೇ ಅವರಿಗೆ ಕುಡಿಯಲು ನೀರು ಕೊಟ್ಟು ಸಮಾಧಾನಪಡಿಸಿದ್ದಾರೆ. ಈ ಘಟನೆ ನೋಡಿ ಎಲ್ಲರೂ ಅಚ್ಚರಿಪಟ್ಟಿದ್ದಾರೆ.

    ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜ್ಯೋತಿ ನನಗೆ ಈ ಹಿಂದೆಯೂ ನಾಗದೇವರು ಮೈಮೇಲೆ ಬಂದ ಅನುಭವ ಆಗಿತ್ತು. ದೊಡ್ಡ, ದೊಡ್ಡ ಪೂಜೆ, ಪುನಸ್ಕಾರ ಮಾಡೋ ಸಂದರ್ಭದಲ್ಲಿ ದೇವಿ ಆರಾಧನೆ ಮಾಡೋವಾಗ ನನ್ನ ಮೈಯಲ್ಲಿ ವೈಬ್ರೇಷನ್ ಆಗುತ್ತೆ. ನನ್ನ ಮೇಲೆ ದೇವಿಯ ಅನುಗ್ರಹ ಇದೆ ಅನ್ನೋದನ್ನ ತೋರಿಸಿಕೊಳ್ಳಲು ಈ ರೀತಿಯಾದ ಘಟನೆ ನಡೆಯುತ್ತೆ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply