Connect with us

LATEST NEWS

ಕರಾವಳಿಯಲ್ಲಿ ಸಂಭ್ರಮದ ನಾಗರಪಂಚಮಿ

ಕರಾವಳಿಯಲ್ಲಿ ಸಂಭ್ರಮದ ನಾಗರಪಂಚಮಿ

ಮಂಗಳೂರು ಅಗಸ್ಟ್ 15: ರಾಜ್ಯಾದ್ಯಂತ ನಾಗರಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಇಂದು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಸೇರಿದಂತೆ ನಾಡಿನಾದ್ಯಂತದ ನಾಗಸನ್ನಿಧಿಯಲ್ಲಿ ಸಂಭ್ರಮ ಶೃದ್ಧಾಭಕ್ತಿಯಿಂದ ಆಚರಿಸಲಾಯಿತು.

ದೇವಾಲಯಗಳಲ್ಲಿ ಕುಟುಂಬದ ಮೂಲ ನಾಗಬನಗಳಲ್ಲಿ ಹಬ್ಬದ ಅಂಗವಾಗಿ ವಿಶೇಷ ಪೂಜೆಗಳು ನಡೆದವು. ನಾಗತಂಬಿಲ, ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿಶೇಷ ಸೇವೆಗಳ ಮೂಲಕ ನಾಗದೇವತೆಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಬಹುತೇಕ ನಾಗಸನ್ನಿಧಿಗಳಲ್ಲಿ ನಾಗರಪಂಚಮಿ ಪ್ರಯುಕ್ತ ಮಧ್ಯಾಹ್ನ ಭಕ್ತರಿಗೆ ವಿಶೇಷ ಅನ್ನಸಂತರ್ಪಣೆ ನಡೆಯಿತು. ಹಬ್ಬದ ಅಂಗವಾಗಿ ಮಾರುಕಟ್ಟೆಗಳಲ್ಲಿ ಅಡಕೆಯ ಹಿಂಗಾರಕ್ಕೆ ಭಾರೀ ಬೇಡಿಕೆಯಿತ್ತು.

ಮಂಗಳೂರಿನ ಕುಡುಪು ದೇವಸ್ಥಾನಕ್ಕೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *