Connect with us

LATEST NEWS

ರಾತ್ರಿ ವೇಳೆ ತೆರಳಿ ಪೊಲೀಸ್ ನೊಟೀಸ್ ನೀಡಿದ್ದು ಸರಿಯಲ್ಲ – ನಳಿನ್ ಕುಮಾರ್ ಕಟೀಲ್

ಮಂಗಳೂರು ಅಕ್ಟೋಬರ್ 16 : ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಗಾರರ ಮನೆಗೆ ತೆರಳಿ ಪೊಲೀಸರು ನೋಟಿಸ್ ನೀಡಿದ್ದರೆ ಅದು ಸರಿಯಲ್ಲ ಎಂದು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗಾರರಿಂದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಇದಕ್ಕೆ ಕೆಲ ಸಮಯ ಬೇಕಾಗಬಹುದು. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ.

ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು. ಕೆಲವೊಂದು ತಾಂತ್ರಿಕ ಕಾರಣಗಳಿಂದ ತೆರವು ಕಾರ್ಯಾಚರಣೆ ವಿಳಂಬವಾಗಿದೆ. ಹೋರಾಟಗಾರರು ಇದನ್ನು ಅರ್ಥ ಮಾಡಿಕೊಂಡು ಸ್ವಲ್ಪ ಕಾಲಾವಕಾಶ ನೀಡುವ ಅಗತ್ಯವಿದೆ ಎಂದು ಮನವಿ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *