LATEST NEWS
ಶಿವಮೊಗ್ಗ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ – ನಳಿನ್ ಕುಮಾರ್ ಕಟೀಲ್
ಮಂಗಳೂರು ಅಕ್ಟೋಬರ್ 02: ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಗಲಾಟೆಯಲ್ಲಿ ಮತಾಂಧ ಶಕ್ತಿಗಳ ಕೈವಾಡ ವಿದ್ದು, ಈದ್ ಮಿಲಾದ್ ಹೆಸರಲ್ಲಿ ಹಿಂದೂಗಳ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ಮಾಡಿದ್ದು, ಅದನ್ನು ಖಂಡಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಮತಾಂಧ ಶಕ್ತಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದವು, ಆಗ ಯಾವುದೇ ಕಠಿಣ ಕ್ರಮಕೈಗೊಳ್ಳದೆ ಇರುವುದರಿಂದ ಮತಾಂಧ ಶಕ್ತಿಗಳು ಮತ್ತೆ ಎದ್ದು ನಿಂತಿವೆ. ಶಿವಮೊಗ್ಗದಲ್ಲಿ ಭಯೋತ್ಪಾದನೆಯ ಚಟುವಟಿಕೆಗಳು ಕಾಣುತ್ತಿವೆ. ಹರ್ಷ ಹತ್ಯೆ, ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಎನ್ ಐಎ ದಾಳಿ ವೇಳೆ ಅತಿ ಹೆಚ್ಚು ಆತಂಕ ಕಂಡುಬಂದಿರುವುದು ತೀರ್ಥ ಹಳ್ಳಿಯಲ್ಲಿ. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂದರ್ಭದಲ್ಲೂ ತೀರ್ಥಹಳ್ಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ಆರಂಭ ಆಗಿದೆ ಎಂಬುದು ತನಿಖೆಯಿಂದ ತಿಳಿದಿದೆ. ಭಟ್ಕಳ ಬ್ರದರ್ಸ್ ಹೆಸರಿನಲ್ಲಿ ಭಟ್ಕಳದಲ್ಲಿ ಭಯೋತ್ಪದನಾ ಚಟುವಟಿಕೆ ಆರಂಭವಾಯಿತು. ತೀರ್ಥಹಳ್ಳಿ ಬ್ರದರ್ಸ್ ಹೆಸರಿನಲ್ಲಿ ಮತಾಂಧ ಶಕ್ತಿಗಳು ಭಯೋತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿರುವುದು ಎನ್ ಐಎ ತನಿಖೆಯಿಂದ ಸ್ಪಷ್ಟವಾಗಿರುವುವುದು ಮಾಧ್ಯಮದಲ್ಲಿ ಕಂಡಿರುವುದಾಗಿ ಅವರು ಹೇಳಿದರು. ರಾಜ್ಯ ಸರಕಾರ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿಗಳು ಸಮುದಾಯವನ್ನು ಓಲೈಸಲು ಕಠಿಣ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
You must be logged in to post a comment Login