DAKSHINA KANNADA
ರಾಜ್ಯ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ – ನಳಿನ್ ಕುಮಾರ್ ಕಟೀಲ್
ಪುತ್ತೂರು ನವೆಂಬರ್ 16: ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿರುವುದರ ವಿರುದ್ದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ನಳಿನ್ ಕುಮಾರ್ ಸುಳ್ಯ ಹಾಗು ಪುತ್ತೂರು ಭಾಗದ ಹಿಂದೂ ಕಾರ್ಯಕರ್ತರ ಮೇಲೆ ಗಡಿಪಾರಿನ ಆದೇಶ ಹೊರಡಿಸಲಾಗಿದೆ. ಯಾವುದೇ ಅಪರಾಧವಿಲ್ಲದಿದ್ದರೂ, ಸುಳ್ಳು ಪ್ರಕರಣ ದಾಖಲು ಮಾಡಲಾಗುತ್ತಿದ್ದು, ಒಂದೇ ಒಂದು ಕೇಸ್ ಇಲ್ಲದವರನ್ನು ಗಡಿಪಾರು ಮಾಡಲಾಗುತ್ತಿದೆ ಎಂದರು. ಈಗಾಗಲೇ ಹಿಂದೂ ಕಾರ್ಯಕರ್ತರಿಗೆ ಗಡಿಪಾರಿಗೆ ನೊಟೀಸ್ ನೀಡಿದ್ದಕ್ಕೆ ಸಂಬಂಧಿಸಿದಂತೆ ಪೋಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದೇನೆ ಎಂದರು.
ಸಿಎಂ ಸಿದ್ಧರಾಮಯ್ಯ ಸರಕಾರದಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ಸಿದ್ಧರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಗೋಹತ್ಯೆ, ರೈತರ ಆತ್ಮಹತ್ಯೆ,ಗೂಂಡಾಗಳ ಹಾವಳಿ ಹೆಚ್ಚಾಗಿದೆ, ರಾಜ್ಯದಲ್ಲಿ ಗೂಂಡಾಗಳಿಗೆ ಹೆಚ್ಚಿನ ಲಾಭ ಆಗಿದೆ, ರಾಜ್ಯ ಇಂದು ಗೂಂಡಾರಾಜ್ಯವಾಗಿ ಬದಲಾಗಿದೆ ಎಂದರು.
You must be logged in to post a comment Login