Connect with us

    LATEST NEWS

    ಪಾದರಾಯನಪುರ ಪ್ರಕರಣ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ – ಸಂಸದ ನಳಿನ್

    ಪಾದರಾಯನಪುರ ಪ್ರಕರಣ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ – ಸಂಸದ ನಳಿನ್

    ಮಂಗಳೂರು ಎಪ್ರಿಲ್ 20: ಪಾದರಾಯನಪುರದಲ್ಲಿ ಕರ್ತವ್ಯನಿರತ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‍ಗೆ ಜಾತಿ, ಮತ ಇಲ್ಲ. ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆದರೆ ಪಾದರಾಯನಪುರದಲ್ಲಿ ಕಾನೂನು ಭಂಜಕರಿಂದ ಈ ಘಟನೆ ನಡೆದಿದ್ದು, ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಈ ಕುರಿತು ಗೃಹಸಚಿವರ ಜೊತೆಗೆ ಮಾತನಾಡಿದ್ದೇನೆ. ಪಾದರಾಯನಪುರದಲ್ಲಿ ಇನ್ನು ಅಂತಹ ಘಟನೆ ನಡೆಯಬಾರದು. ಕೃತ್ಯ ಎಸಗಿದವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ ಎಂದು ಒತ್ತಾಯಿಸಿದ್ದಾರೆ.

    ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ. ಸರ್ಕಾರಿ ಅಧಿಕಾರಿಗಳ ವಿರುದ್ಧ ಹೋಗಿದ್ದು ಖಂಡನೀಯ. ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದೊಂದು ರಾಷ್ಟ್ರ ವಿರೋಧಿ ಕೃತ್ಯ ಎಂದು ಕಿಡಿಕಾರಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply