LATEST NEWS
ಕಾಂಗ್ರೇಸ್ ಸರಕಾರ ಜನರ ಭಾವನೆಗಳಿಗೆ ವಿರುದ್ದವಾಗಿ ಕೆಲಸ ಮಾಡುತ್ತಿದೆ – ನಳಿನ್ ಕುಮಾರ್ ಕಟೀಲ್
ಮಂಗಳೂರು ಜೂನ್ 27: ಕಾಂಗ್ರೇಸ್ ನೇತೃತ್ವದ ರಾಜ್ಯ ಸರಕಾರದ ಜನರ ಭಾವನೆಗಳಿಗೆ ವಿರುದ್ದವಾಗಿ ಕೆಲಸ ಮಾಡುತ್ತಿದೆ. ಹೀಗೆ ಆದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗುವುದು ಖಂಡಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗೋಹತ್ಯೆ ನಿಷೇಧ ಕಾಯ್ದೆದೆ ವಾಪಸ್ ಪಡೆಯುವ ಪ್ರಸ್ತಾಪ ಉಲ್ಲೇಖಿಸಿ ಹೇಳಿದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೋ ರಕ್ಷಣೆಯ ಉದ್ದೇಶಕ್ಕೆ ಬಿಜೆಪಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿತ್ತು. ಮಹಾತ್ಮ ಗಾಂಧಿಯೂ ಗೋಸಂರಕ್ಷಣೆ ಆಗಬೇಕೆಂದು ಹೇಳಿದ್ದರು ಎಂದರು. ಕೆಲವು ಆಚರಣೆಯ ವೇಳೆ ಗೋ ಹತ್ಯೆ ಆಗುತ್ತದೆ. ಗೋವುಗಳ ರಕ್ಷಣೆಗಾಗಿ ನಾವು ಕಾನೂನು ತಂದಿದ್ದು, ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಚಿವ ಪ್ರಿಯಾಂಕ ಖರ್ಗೆ ಅವರು ಎಚ್ಚರಿಕೆಯಿಂದ ಮಾತನಾಡಬೇಕು. ಜನರ ಆಶಯಗಳಿಗೆ ಸರ್ಕಾರ ಗೌರವ ನೀಡಬೇಕು. ಪೊಲೀಸರೂ ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
You must be logged in to post a comment Login