LATEST NEWS
ಸುರತ್ಕಲ್ ಟೋಲ್ ಗೇಟ್ ತೆರವಿಗೆ ಕೈ ಮುಗಿದು ಮನವಿ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು ಫೆಬ್ರವರಿ 28: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸುರತ್ಕಲ್ ನ ಟೋಲ್ ಗೇಟ್ ನ್ನು ತೆರವುಗೊಳಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಕೈ ಮುಗಿದು ವಿನಂತ ಮಾಡಿದ್ದಾರೆ.
ರಾಜ್ಯದ ಪ್ರವಾಸದಲ್ಲಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಕರಾವಳಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಗೆ ಆಗಮಿಸಿದ್ದರು.
ಈ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಅನೇಕ ಹೋರಾಟಗಳು ನಡೆಯುತ್ತಿದ್ದು, ಹೀಗಾಗಿ ದಯವಿಟ್ಟು ಆ ಟೋಲ್ ಗೇಟ್ ತೆಗೆಯಿರಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ನಳಿನ್ ಮನವಿ ಮಾಡಿಕೊಂಡಿದ್ದಾರೆ.
ನಂತರ ಮಾತನಾಡಿದ ಗಡ್ಕರಿ ಅವರು ಸುರತ್ಕಲ್ ಟೋಲ್ ಸಮಸ್ಯೆ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಕೆಲವೊಂದು ಕಾನೂನಾತ್ಮಕ ತೊಡಕುಗಳಿವೆ. ಇದರ ಬಗ್ಗೆ ಶೀಘ್ರ ಒಂದು ಸಭೆ ಕರೆಯುತ್ತೇನೆ ಹಾಗೂ ಪರಿಹಾರ ಕಂಡುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
You must be logged in to post a comment Login