LATEST NEWS
ನಮಾಜು ಪ್ರಕರಣ: ” B ” ರಿಪೋರ್ಟ್ ರದ್ದು ಪಡಿಸಲು ವಿಶ್ವ ಹಿಂದೂ ಪರಿಷದ್ ಮನವಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು, ಜೂನ್ 03: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ ಸಲ್ಲಿಸಲಾಗಿದೆ.
ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಲು ಮತ್ತು ಕರ್ನಾಟಕ ಸರಕಾರ ದ್ವೇಷ ರಾಜಕಾರಣ ಮಾಡಿ ಹಿಂದೂ ನಾಯಕ ಶರಣ್ ಪಂಪುವೆಲ್ ರವರನ್ನು ಗುರಿಯಾಗಿಸಿ ದಾಖಲಿಸಿದ ಪ್ರಕರಣ ವಾಪಾಸ್ ಪಡೆಯಲು ಹಾಗು ಆ ಪ್ರಕರಣದಲ್ಲಿ ಕಡ್ಡಾಯ ರಜೆಯಲ್ಲಿ ಕಳುಹಿಸಿದ ಪೊಲೀಸ್ ಅಧಿಕಾರಿಯ ಕಡ್ಡಾಯ ರಜೆ ರದ್ದುಪಡಿಸಲು ಆಗ್ರಹಿಸಿ ಮಾನ್ಯ ಜೆಲ್ಲಾಧಿಕಾರಿಗಳ ಮುಖಾಂತರ ಘನವೆತ್ತ ರಾಜ್ಯಪಾಲರು ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಗೆ ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ಮನವಿ ಸಲ್ಲಿಸಲಾಯಿತು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ, ಪ್ರಾಂತ ಸಹಸೇವಾ ಪ್ರಮುಖ್ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಹಕಾರ್ಯದರ್ಶಿ ಗುರುಪ್ರಸಾದ್ ಹಾಗು ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ ಈ ಸಂಧರ್ಭದಲ್ಲಿ ಉಪಸ್ಥಿತಿ ಇದ್ದರು.
You must be logged in to post a comment Login