Connect with us

    FILM

    ತೆಲುಗು ಚಿತ್ರ ನಟ ನಂದಮೂರಿ ತಾರಕ ರತ್ನ ನಿಧನ

    ಬೆಂಗಳೂರು ಫೆಬ್ರವರಿ 18: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ಚಿತ್ರನಟ ನಂದಮೂರಿ ತಾರಕ ರತ್ನ (40) ಇಂದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.


    ಜನವರಿ 27ರಂದು ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್‌ ನೇತೃತ್ವದಲ್ಲಿ ಕುಪ್ಪಂನಿಂದ ಹಮ್ಮಿಕೊಂಡ ‘ಯುವಗಳಂ’ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಅಂದು ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಅಮೆರಿಕದ ಹೃದಯ ತಜ್ಞರ ತಂಡವೊಂದು ಅವರ ಆರೋಗ್ಯದ ಮೇಲೆ ನಿಗಾ ಇರಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply