Connect with us

FILM

ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಶಿವಶಂಕರ್ ಕೋವಿಡ್ ಗೆ ಬಲಿ

ಚೆನ್ನೈ : ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಕೊರೊನಾಗೆ ಬಲಿಯಾಗಿದ್ದಾರೆ. ತೆಲುಗು, ತಮಿಳಿ ಸೇರಿ 800ಕ್ಕೂ ಹೆಚ್ಚು ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದರು. ಶಿವಶಂಕರ್‌ ಮಾಸ್ಟರ್‌ ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.


ಶಿವಶಂಕರ್‌ ಸೇರಿದಂತೆ ಅವರ ಹಿರಿಯ ಮಗನಿಗೆ ಕೋವಿಡ್‌ ದೃಢಪಟ್ಟಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚವನ್ನು ಭರಿಸಲು ಬಾಲಿವುಡ್‌ ನಟ ಸೋನು ಸೂದ್‌ ಒಪ್ಪಿಕೊಂಡಿದ್ದರು. ಅವರು ಟ್ವಿಟರ್‌ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು. ಈವರೆಗೂ ಸುಮಾರು 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಕೆಲಸ ಮಾಡಿದ್ದರು. ಹಲವು ಸಲ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದರು. ಮಗಧೀರ ಸಿನಿಮಾದ ನೃತ್ಯಕ್ಕೆ ಅವರಿಗೆ ರಾಷ್ಟ್ರಪಶಸ್ತಿ ಸಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *