Connect with us

DAKSHINA KANNADA

ಮತ್ತೆ ಕುಸಿದ ಚೆರುವತ್ತೂರಿನ ವೀರಾಮಲ ಬೆಟ್ಟ – ಕನ್ಯಾಕುಮಾರಿ- ಪನ್ವೇಲ್ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಬಂದ್

ಕಾಸರಗೋಡು ಜುಲೈ 24: ಕಾಸರಗೋಡಿನ ಚೆರುವತ್ತೂರಿನ ವೀರಾಮಲ ಬೆಟ್ಟ ಕುಸಿತವಾಗಿದ್ದು, ಕೇರಳ, ಕನ್ಯಾಕುಮಾರಿ- ಪನ್ವೇಲ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ. ಸದ್ಯ ಸಂಚಾರಕ್ಕೆ ಬದಲಿ ರಸ್ತೆ ಮಾರ್ಗವನ್ನು ಸ್ಥಳೀಯಾಡಳಿತ ಸೂಚಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಹೆದ್ದಾರಿಯಲ್ಲಿ ಹೆಚ್ಚಿನ ವಾಹನ ಸಂಚಾರ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಈ ಹಿಂದೆಯೂ ಇದೆ ಭಾಗದಲ್ಲಿ ಭೂ ಕುಸಿತವಾಗಿ ಮಣ್ಣಿನಡಿ ಸಿಲುಕಿ ಕಾರ್ಮಿಕರು ಪಾರಾಗಿದ್ದರು. ಈ ಭಾಗದಲ್ಲಿ ಹಲವು ಸಮಯದಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಇಂದು ಮಧ್ಯಾಹ್ನದ ವೇಳೆಗೆ ಸಂಚಾರ ಸಾಮಾನ್ಯ ಸ್ಥಿತಿಗೆ ಬರುವ ನಿರೀಕ್ಷೆಯಿದೆ. ಸದ್ಯ ಸ್ಥಳಕ್ಕೆ ಕಾಸರಗೋಡು ಎಸ್.ಪಿ ವಿಜಯ್ ಭರತ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಚೆಂಗಳ-ನೀಲೇಶ್ವರಂ ಮಾರ್ಗವನ್ನು ನಿರ್ಮಿಸುತ್ತಿರುವ ಮೇಘಾ ಎಂಜಿನಿಯರಿಂಗ್ ಕಂಪೆನಿಯ ಅವೈಜ್ಞಾನಿಕ ಬೆಟ್ಟ ಕಡಿಯುವ ಪದ್ಧತಿಗಳಿಂದಾಗಿ ಈ ಪ್ರದೇಶದಲ್ಲಿ ಆಗಾಗ್ಗೆ ಭೂಕುಸಿತಗಳು ಸಂಭವಿಸುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಜೂನ್ 17 ರಂದು ಬೇವಿಂಜೆಯಲ್ಲಿ ಸಂಭವಿಸಿದ ದೊಡ್ಡ ಭೂಕುಸಿತದ ನಂತರ ಅದೇ ಭಾಗದಲ್ಲಿ ಚೆರ್ಕಳ-ಚಟ್ಟಂಚಲ್ ಘಾಟ್ ರಸ್ತೆಯನ್ನು ಸುಮಾರು ಒಂದು ತಿಂಗಳ ಕಾಲ ಮುಚ್ಚಲಾಗಿತ್ತು ಎಂಬುದು ಗಮನಿಸಬೇಕಾದ ಸಂಗತಿ. ಆ ಮಾರ್ಗದಲ್ಲಿ ಸಂಚಾರ ಇತ್ತೀಚೆಗೆ ಪುನರಾರಂಭಗೊಂಡಿತ್ತು.

ಮುಂದಿನ ಸೂಚನೆ ಬರುವವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆರುವತ್ತೂರಿನಿಂದ ನೀಲೇಶ್ವರಕ್ಕೆ ವಾಹನ ಸಂಚಾರ ನಿಷೇಧಿಸಲಾಗಿದೆ. ಮಣ್ಣು ತೆರವುಗೊಳಿಸಿದ ನಂತರ ನಿನ್ನೆ ರಾತ್ರಿಯಿಂದ ಒಂದೇ ಪಥದಲ್ಲಿ ಭಾರೀ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *