Connect with us

    LATEST NEWS

    ಉಡುಪಿ – ಆತ್ಮಹತ್ಯೆಗೆ ಶರಣಾದ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ವಿರಾಜ್ ಮೆಂಡನ್

    ಉಡುಪಿ ಸೆಪ್ಟೆಂಬರ್ 05: ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಗರ ನಿವಾಸಿ 24 ವರ್ಷ ಪ್ರಾಯದ ವಿರಾಜ್ ಮೆಂಡನ್ ಎಂದು ಗುರುತಿಸಲಾಗಿದೆ.


    ಈತ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ,ಒಳ್ಳೆಯ ಕ್ರೀಡಾಪಟು ಎಂಬ ಹೆಸರನ್ನು ಪಡೆದಿದ್ದ. ಇಂದು ಶಾಂತಿನಗರದಲ್ಲಿರುವ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply