Connect with us

LATEST NEWS

ಪ್ರಾಕೃತಿಕ ವಿಕೋಪ ಪರಿಹಾರ ಹೆಚ್ಚಳಕ್ಕೆ ಕ್ರಮ- ಆರ್.ವಿ.ದೇಶಪಾಂಡೆ

ಪ್ರಾಕೃತಿಕ ವಿಕೋಪ ಪರಿಹಾರ ಹೆಚ್ಚಳಕ್ಕೆ ಕ್ರಮ- ಆರ್.ವಿ.ದೇಶಪಾಂಡೆ

ಉಡುಪಿ, ಜೂನ್ 14: ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಭಾಗಶಃ ಹಾನಿಯಾಗುವ ಆಸ್ತಿ ಪಾಸ್ತಿಗೆ ಸರಕಾರದಿಂದ ನೀಡುತ್ತಿರುವ ಪರಿಹಾರದ ಮೊತ್ತ ಕಡಿಮೆ ಇದ್ದು, ಈ ಮೊತ್ತವನ್ನು ಹೆಚ್ಚಳ ಮಾಡುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಹಣಕಾಸು ಇಲಾಖೆಯ ಮೂಲಕ ಹೆಚ್ಚಿನ ಪರಿಹಾರ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಕಂದಾಯ ಮತ್ತು ಕೌಶಲಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಅವರು ಗುರುವಾರ ಜಿಲ್ಲೆಯ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಭಾಗಶಃ /ಸಂಪೂರ್ಣ ಹಾನಿಯಾದ ಮನೆಗಳ 17 ಕುಟುಂಬಗಳಿಗೆ , 10.75 ಲಕ್ಷ ರೂ ಮೊತ್ತದ ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಆಸ್ತಿಪಾಸ್ತಿ ಹಾಗೂ ಜೀವಹಾನಿ ಕುರಿತು ಸಮೀಕ್ಷೆ ಮಾಡಲಾಗುತ್ತಿದೆ, ಪ್ರಸ್ತುತ ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಭಾಗಶಃ ಹಾನಿಗೊಳಗಾಗುವ ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರದ ಮೊತ್ತ ಅತ್ಯಲ್ಪವಾಗಿದ್ದು.

ಇದನ್ನು ಕೇಂದ್ರ ಸರ್ಕಾರ ರೂಪಿಸಿರುವ ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತ ಬಿಡುಗಡೆ ನಿಯಮಗಳಿಗೆ ಅನುಗುಣವಾಗಿ ವಿತರಿಸಲಾಗುತ್ತಿದೆ, ರಾಜ್ಯದಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಭವಿಸಿದ ಜೀವಹಾನಿಗೆ 4 ಲಕ್ಷ ರೂ ಪರಿಹಾರದೊಂದಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯ 1 ಲಕ್ಷ ರೂ ಸೇರಿಸಿ ಒಟ್ಟು 5 ಲಕ್ಷ ಪರಿಹಾರ ನೀಡಲಾಗುತ್ತಿದೆ,ಮನೆ ಇನ್ನಿತರ ಆಸ್ತಿ ಹಾನಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ , ಪರಿಹಾರ ಮೊತ್ತ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದೇಶಪಾಂಡೆ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಪರಿಹಾರಕ್ಕಾಗಿ 5 ಕೋಟಿ ರೂ ಬಿಡುಗಡೆಗೊಳಿಸಿದ್ದು, ಪರಿಹಾರ ನಿಧಿ ಬಿಡುಗಡೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *