Connect with us

LATEST NEWS

ಕಾಂಗ್ರೆಸ್‌ ಸರಕಾರ ಬಂದ ಬಳಿಕ ನಕ್ಸಲ್‌ ಚಟುವಟಿಕೆ ಹೆಚ್ಚಳ : ಸುನಿಲ್‌ ಕುಮಾರ್‌

ಕಾರ್ಕಳ ನವೆಂಬರ್ 19: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಿಕ್ಕೆ ಬಂದ ಬಳಿಕ ಮತ್ತೆ ನಕ್ಸಲರ ಚಟುವಟಿಕೆಗಳು ಮತ್ತು ಇನ್ನಿತರ ಅಪರಾಧ ಕೃತ್ಯಗಳು ಹೆಚ್ಚಾಗಿವೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ.


ಹೆಬ್ರಿಯ ನಕ್ಸಲ್‌ ಎನ್‌ಕೌಂಟರ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆ ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿವೆ. ನಗರ ನಕ್ಸಲ್‌ಗಳು ಸಹ ಇದ್ದಾರೆ. ಕಾಡಿನಲ್ಲಿ ಕೂತು ಬಂದೂಕು ಹಿಡಿದು ಕಾರ್ಯಚರಣೆ ಮಾಡುವವರು ಇದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು. ಇವರೆಲ್ಲ ಹೊರ ರಾಜ್ಯಗಳಲ್ಲಿ ತಲೆಮರಿಸಿಕೊಂಡಿದ್ದರು. ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ತಮ್ಮ ಚಟುವಟಿಕೆಗಳನ್ನು ಮಾಡಲು ಬಂದಿದ್ದಾರೆ. ನಗರ ನಕ್ಸಲ್‌ಗಳ ಚಟುವಟಿಕೆಗಳನ್ನ ಸರ್ಕಾರ ಗಮನಿಸಬೇಕು. ವಿಶ್ವವಿದ್ಯಾಲಯ, ಸಾಹಿತಿಗಳು ಎಂದು ಹೇಳಿಕೊಳ್ಳುವವರು, ಬುದ್ಧಿಜೀವಿಗಳು ಈ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.

ನಕ್ಸಲರ ಮಟ್ಟ ಹಾಕಬೇಕು. ಕ್ಷಮೆ ಕೋರಿ ಬರುವ ವಿಚಾರದಲ್ಲಿ ಸರ್ಕಾರ ಚರ್ಚೆ ಮಾಡಬೇಕು. ನಕ್ಸಲ್ ಚಟುವಟಿಕೆಯನ್ನ ಮತ್ತೆ ನಗರಕ್ಕೆ ಬಂದು ಮುಂದುವರಿಸುವವರಿದ್ದಾರೆ. ಅದರ ಬಗ್ಗೆ ನಿಗಾವಹಿಸಬೇಕು. ನಕ್ಸಲ್ ನಿಗ್ರಹ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಆಗ್ರಹಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *