Connect with us

    KARNATAKA

    ಕಾಂಗ್ರೇಸ್ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಫಯಾಜ್‌

    ಹುಬ್ಬಳ್ಳಿ ಎಪ್ರಿಲ್ 18: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯನ್ನು ಆಕೆಯ ಸಹಪಾಠಿಯೊಬ್ಬ 9 ಬಾರಿ ಇರಿದು ಕೊಲೆ ಮಾಡಿದ ಘಟನೆ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ.


    ಕೊಲೆಯಾದ ಯುವತಿಯನ್ನು ಬಿವಿವಿ ಕಾಲೇಜಿನಲ್ಲಿ ಎಂಸಿಎ ವಿಭಾಗದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (25) ಎಂದು ಗುರುತಿಸಲಾಗಿದ್ದು, ಆರೋಪಿ ಆಕೆಯ ಸಹಪಾಠಿ ಫಯಾಜ್‌ (27). ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ. ತನ್ನನ್ನು ಪ್ರೀತಿಸುವಂತೆ ನೇಹಾಗೆ ಫಯಾಜ್ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಕಾರಣ ಕೋಪಗೊಂಡ ಆತ ಗುರುವಾರ ಸಂಜೆ ಕೃತ್ಯವೆಸಗಿದ. ನೇಹಾ ಮೇಲೆ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿ, ಕುತ್ತಿಗೆಗೆ ಹಲವು ಬಾರಿ ಇರಿದ. ಆಕೆಯನ್ನು ತಕ್ಷಣವೇ ವಿದ್ಯಾರ್ಥಿಗಳು ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಮಾರ್ಗ ಮಧ್ಯೆ ನೇಹಾ ಕೊನೆಯುಸಿರೆಳೆದರು’ ಎಂದು ಪೊಲೀಸರು ತಿಳಿಸಿದ್ದಾರೆ.
    ಘಟನೆ ಖಂಡಿಸಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ರಾತ್ರಿ ಪ್ರತಿಭಟನೆ ನಡೆಸಿ, ಆರೋ‍ಪಿಗೆ ಗಲ್ಲುಶಿಕ್ಷಿ ವಿಧಿಸುವಂತೆ ಆಗ್ರಹಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply