ಮಂಗಳೂರು ಎಪ್ರಿಲ್ 18: ನಗರದ ಸ್ಟೇಟ್ಬ್ಯಾಂಕ್ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್ ಎಂದು ಗುರುತಿಸಲಾಗಿದೆ.

ಸ್ಟೇಟ್ಬ್ಯಾಂಕ್ನ ಬಳಿಯ ನೆಹರೂ ಮೈದಾನದ ಬದಿಯಲ್ಲಿ ಕಲ್ಲಿನಿಂದ ಮುಖ ಜಜ್ಜಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜನಾರ್ದನ್ ಪೊಳಲಿ ಮೂಲದವರಾಗಿದ್ದರು ಡ್ರೈವರ್ ವೃತ್ತಿ ನಿರ್ವಹಿಸುತ್ತಿದ್ದರು. ಇವರು ಬಿಜೆಪಿ ಕಾರ್ಯಕರ್ತರಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ.

‘ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ