Connect with us

    DAKSHINA KANNADA

    ಉಪ್ಪಿನಂಗಡಿ -ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮೃತಪಟ್ಟ ಆಶಾ ಕಾರ್ಯಕರ್ತೆಯ ಪುಟ್ಟ ಕಂದಮ್ಮನೂ ನಿಧನ

    ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.


    ಭವ್ಯರವರು ತನ್ನ 3ನೇ ಹೆರಿಗೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ ಮಗುವನ್ನು ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವೂ ಮೃತಪಟ್ಟಿದೆ ಎನ್ನಲಾಗಿದೆ. ಮೃತರು ಪತಿ ಬಾಲಕೃಷ್ಣ ಗೌಡ, 4ನೇ ತರಗತಿ ಕಲಿಯುತ್ತಿರುವ ಪುತ್ರ ಭವಿಷ್, 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸು ಗಂಡು ಮಗುವನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply