Connect with us

DAKSHINA KANNADA

ದತ್ತನಗರದಲ್ಲಿ ನೂತನ ಪಾರ್ಕ್ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಾರ್ಚ್ 09: ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರದ ದತ್ತನಗರದಲ್ಲಿ ನೂತನ ಪಾರ್ಕ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಹೊಸ‌ ಪಾರ್ಕ್ ನಿರ್ಮಾಣ ಹಾಗೂ ಪಾರ್ಕ್ ಗಳ ಅಭಿವೃದ್ಧಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಯೋಜನೆ ರೂಪಿಸಲಾಗಿದೆ. ನಗರದ ಪ್ರಮುಖ ಕೇಂದ್ರಗಳಲ್ಲಿ ಪಾರ್ಕ್ ನಿರ್ಮಾಣದಿಂದ ಸಾರ್ವಜನಿಕರಿಗೆ ಉಪಯೋಗವಾಗುತ್ತಿದ್ದು ಗ್ರೀನ್ ಮಂಗಳೂರು ಪರಿಕಲ್ಪನೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಜೀರ್ಣಾವಸ್ಥೆಯಲ್ಲಿರುವ‌ ಕೆರೆಗಳ ಅಭಿವೃದ್ಧಿ ಕಾಮಗಾರಿಗಳೂ ಭರದಿಂದ ಸಾಗುತ್ತಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಪಾರ್ಕ್ ಹಾಗೂ ಕೆರೆಗಳ ಅಭಿವೃದ್ಧಿಗೆ ವಿಶೇಷವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *