Connect with us

DAKSHINA KANNADA

ದಕ್ಷಿಣಕನ್ನಡ ಜಿಲ್ಲೆ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್‌

ಮಂಗಳೂರು ಫೆಬ್ರವರಿ 01: ಚುನಾವಣೆ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ವರ್ಗಾವಣೆ ಮಾಡಲಾಗಿದ್ದು. ಇದೀಗ ಅವರ ಜಾಗಕ್ಕೆ ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರನ್ನು ನಿಯೋಜಿಸಲಾಗಿದೆ.


2015ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಹೃಷಿಕೇಶ್‌ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.

 

Share Information
Advertisement
Click to comment

You must be logged in to post a comment Login

Leave a Reply