DAKSHINA KANNADA
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ : ನಳಿನ್ ಕುಮಾರ್ ಕಟೀಲ್
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರು : ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು;
• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ.
• ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಮಾನ್ಯ ಸಚಿವರನ್ನು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.
• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ.
• ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
• ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಭವನ್ನು ನಿವಾರಣೆಯ ಬಗ್ಗೆ ಮಾನ್ಯ ಸಂಸದರು ಮಾನ್ಯ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.
You must be logged in to post a comment Login