Connect with us

LATEST NEWS

ಮರೋಳಿ – ನವದಂಪತಿ ನೇಣಿಗೆ ಶರಣು….!!

ಮಂಗಳೂರು ಅಕ್ಟೋಬರ್ 10: ಪ್ರೀತಿಸಿ ವರ್ಷಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.


ಮೃತರನ್ನು ಮೂಲತಃ ಬೆಳಗಾವಿ ನಿವಾಸಿ ಮಲ್ಲಿಕಾರ್ಜುನ(34) ಮತ್ತು ಅವರ ಪತ್ನಿ ಸೌಮ್ಯ(35) ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದಷ್ಟೆ ಇವರು ಮದುವೆಯಾಗಿದ್ದರು ಎನ್ನಲಾಗುತ್ತಿದ್ದು ಮರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
ಮಲ್ಲಿಕಾರ್ಜುನ ಆನ್ಲೈನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು ಮಂಗಳೂರಿನ ನಿವಾಸಿ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ದಂಪತಿ ಎರಡು ದಿನದ ಹಿಂದೆ ಮಡಿಕೇರಿಗೆ ಪ್ರವಾಸ ಹೋಗಿದ್ದು ಭಾನುವಾರ ರಾತ್ರಿ ಮರಳಿ ಮಂಗಳೂರಿಗೆ ಬಂದಿದ್ದರು. ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಎನ್. ಶಶಿ ಕುಮಾರ್ ಅವರು ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕೊಡಗಿನಿಂದ ಹಿಂದಿರುಗಿದ ಬಳಿಕ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಆ ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿದ ಸೌಮ್ಯ ತಾವೂ ಕೂಡಾ ಆತ್ಮಹತ್ಯೆಗೆ ಶರಣಾಗಿದ್ಧಾರೆ ಎಂದು ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *