DAKSHINA KANNADA
ಪ್ರವೀಣ್ ನೆಟ್ಟಾರ್ ಕೊಲೆಆರೋಪಿಗಳು ಶರಣಾಗದಿದ್ದಲ್ಲಿ ಮನೆಗಳ ಮುಟ್ಟುಗೋಲಿಗೆ NIA ಘೋಷಣೆ
ಪುತ್ತೂರು ಜೂನ್ 28: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ವಿರುದ್ದ ಇದೀಗ ರಾಷ್ಟ್ರೀಯ ತನಿಖಾದಳ ತನ್ನ ಹೊಸ ಅಸ್ತ್ರ ಪ್ರಯೋಗಿಸಿದ್ದು, ಆರೋಪಿಗಳು ಎರಡು ದಿನದಲ್ಲಿ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮುಂದಾಗಿದ್ದಾರೆ.
ಇಂದು ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂನ್ 30ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಗಳನ್ನು ಮುಟ್ಟುಗೋಲು ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.ಎನ್ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯದ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆಯೂ ಬೆಳ್ಳಾರೆಯಲ್ಲಿ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಘೋಷಿಸಿ ಆರೋಪಿ ಮುಸ್ತಫ ಎಂಬಾತನ ಮನೆಗೂ ಆದೇಶ ಪ್ರತಿ ಅಂಟಿಸಲಾಗಿದೆ.
ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. NIA ನ್ಯಾಯಾಲಯದ ಅಧಿಕಾರಿಗಳು ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನುಅಂಟಿಸಿದ್ದು ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.
You must be logged in to post a comment Login