Connect with us

LATEST NEWS

ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊಹಮ್ಮದ್ ಶಾರಿಕ್‌ ಎನ್ಐಎ ಕಸ್ಟಡಿಗೆ

ಬೆಂಗಳೂರು ಮಾರ್ಚ್ 7: ಮಂಗಳೂರಿನ ಕಂಕನಾಡಿಯ ಗರಡಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಮಾರ್ಚ್ 15ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.


ಕುಕ್ಕರ್ ಬಾಂಬ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾರಿಕ್ ಮಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣಿಸದ ಹಿನ್ನಲೆ 2022ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೂರೂವರೆ ತಿಂಗಳು ಚಿಕಿತ್ಸೆ ಪಡೆದಿದ್ದ ಶಾರಿಕ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಈತನನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್‌ಐಎ: ಶಾರೀಕ್‌ನ ಚಿಕಿತ್ಸೆ ಸಮಯದಲ್ಲಿ ಎನ್‌ಐಎ ಅಧಿಕಾರಿಗಳು ಕಾವಲಿಗಿದ್ದರು. ಶಾರಿಕ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ವಶಕ್ಕೆ ಪಡೆದ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ‘ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ನನ್ನು ಇದುವರೆಗೂ ವಿಚಾರಣೆ ಮಾಡಿಲ್ಲ. ಈತ, ಭಯೋತ್ಪಾದನಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಮಾಹಿತಿ ಇದೆ. ವಿಚಾರಣೆಗಾಗಿ ಈತನನ್ನು ಕಸ್ಟಡಿಗೆ ನೀಡಬೇಕು’ ಎಂದು ಎನ್‌ಐಎ ಅಧಿಕಾರಿಗಳು ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಾರಿಕ್‌ನನ್ನು ಕಸ್ಟಡಿಗೆ ವಹಿಸಿತು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *