Connect with us

    KARNATAKA

    ನೈಸ್ ರಸ್ತೆ ಭೀಕರ ರಸ್ತೆ ಅಪಘಾತಕ್ಕೆ ಹೊತ್ತಿ ಉರಿದ ಕಾರು – ತಾಯಿ ಮಗು ಸಜೀವ ದಹನ

    ಬೆಂಗಳೂರು ಅಕ್ಟೋಬರ್ 03: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಈ ವೇಳೆ ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ.


    ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಮೋರಿಗೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನವಾಗಿದ್ದಾರೆ.

    ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.
    ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply