Connect with us

    LATEST NEWS

    ಮತ್ತೆ ಎರಡು ದಿನ ನೈಟ್ ಕರ್ಫ್ಯೂ ಮುಂದುವರಿಸಿ ಜಿಲ್ಲಾಧಿಕಾರಿ ಆದೇಶ…!!

    ಮಂಗಳೂರು ಅಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬೆನ್ನಲ್ಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಆದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.


    ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ಆಗಸ್ಟ್‌ 2ರ ಸಂಜೆ 6 ಗಂಟೆಯಿಂದ ಆಗಸ್ಟ್ 4ರ ಮುಂಜಾನೆ 6 ರವರೆಗೆ ನಿರ್ಬಂಧ ಮುಂದುವರಿಸಲಾಗಿದೆ. ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಅಂಗಡಿ-ಮುಂಗಟ್ಟು ಬಂದ್‌ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಜುಲೈ 29ರ ಸಂಜೆ 6 ಗಂಟೆಯಿಂದ ಆಗಸ್ಟ್‌ 1ರ ಮುಂಜಾನೆ 6ರವರೆಗೆ ಜಾರಿಯಲ್ಲಿದ್ದ ನಿರ್ಬಂಧವನ್ನು ಇದೀಗ ಮತ್ತೆರಡು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.

    ಇನ್ನು ಬೆಳಗ್ಗೆನಿಂದ ಸಂಜೆ 6 ಗಂಟೆಯೊಳಗೆ ಎಂದಿನಂತೆ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಆದೇಶವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply