LATEST NEWS
ನಿಸರ್ಗ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ
ನಿಸರ್ಗ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಇನ್ನು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಹಿನ್ನಲೆ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಕರಾವಳಿಯಲ್ಲಿ ಮಳೆ ಪ್ರಾರಂಭವಾಗಿದ್ದು, ಇನ್ನು ಎರಡು ದಿನ ಭಾರಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ಮಳೆಯಾಗಲಿದೆ, ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು (ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಜೂ.4 ರಂದು) ಜಿಲ್ಲೆಗೆ ಆಗಮಿಸಲಿದೆ.
ಕೇರಳಕ್ಕೆ ಮುಂಗಾರು ಜೂನ್ ಒಂದರಂದು ಪ್ರವೇಶಿಸಿದ್ದು, ಈ ಚಂಡಮಾರುತದಿಂದ ಕರ್ನಾಟಕ ಕರಾವಳಿಯ ಮುಂಗಾರಿನ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.
You must be logged in to post a comment Login