Connect with us

LATEST NEWS

ಮಂಗಳೂರು – ದಿಗಂತ್ ರೀತಿಯಲ್ಲೇ ಫೆಬ್ರವರಿ 13 ರಿಂದ ನಾಪತ್ತೆಯಾಗಿರುವ ಮತ್ತೊಬ್ಬ ವಿಧ್ಯಾರ್ಥಿ ನಿತೇಶ್ ಬೆಲ್ಚಡ

ಮಂಗಳೂರು ಮಾರ್ಚ್ 09: ರಾಜ್ಯ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಫರಂಗಿಪೇಟೆಯ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಆದರೆ ಮಂಗಳೂರಿನಿಂದ ಫೆಬ್ರವರಿ 13 ರಿಂದ ನಾಪತ್ತೆಯಾಗಿರುವ ಮತ್ತೊಬ್ಬ ವಿಧ್ಯಾರ್ಥಿ ಪ್ರಕರಣದ ಬಗ್ಗೆ ಇದುವರೆಗೆ ಯಾವುದೇ ಅಪ್ಡೆಟ್ ಸಿಕ್ಕಿಲ್ಲ.


ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೇಶ್ ಬೆಲ್ಚಡ್ ಫೆಬ್ರವರಿ 13 ರಿಂದ ನಾಪತ್ತೆಯಾಗಿದ್ದಾನೆ. ಆತ ಎಲ್ಲಿಗೆ ಹೋಗಿದ್ದಾನೆ ಎನ್ನುವ ಸುಳಿವು ಇಲ್ಲಿಯವರೆಗೆ ಸಿಕ್ಕಿಲ್ಲ.

ಇದೀಗ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಶೇಷ ತಂಡ ರಚಿಸಿ ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಪತ್ತೆ ಮಾಡುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ನಿತೇಶ್ ಫೆಬ್ರವರಿ 13ರಂದು ಕಾಲೇಜಿನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋಗಿದ್ದು, ವಾಪಸು ಮನೆಗೆ ಬಂದಿಲ್ಲ. 5.5 ಅಡಿ ಎತ್ತರ, ಗೋ ಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದಾರೆ. ನಾಪತ್ತೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *