Connect with us

LATEST NEWS

ನಾಲ್ಕನೇ ಪಟ್ಟಿಯಲ್ಲೂ ಮಂಗಳೂರು ಉತ್ತರ ಸಿಗದ ಕಾಂಗ್ರೇಸ್ ಅಭ್ಯರ್ಥಿ

ಮಂಗಳೂರು ಎಪ್ರಿಲ್ 18: ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಯ ಅವಧಿ ಕೊನೆಗೊಳ್ಳುವುದಕ್ಕೆ ಇನ್ನು ಎರಡೇ ದಿನಗಳು ಬಾಕಿ ಉಳಿದಿವೆ. ಆದರೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಯಾರು ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.


ಕಾಂಗ್ರೇಸ್ ಪಕ್ಷವು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಅದರಲ್ಲೂ ಮಂಗಳೂರು ಉತ್ತರ ಕ್ಷೇತ್ರದ ಬಗ್ಗೆ ಉಲ್ಲೇಖವಿಲ್ಲ. ಮಾಜಿ ಶಾಸಕ ಬಿ. ಎ ಮೊಹಿಯುದ್ದೀನ್ ಹಾಗೂ ಇನಾಯತ್ ಆಲಿ ನಡುವೆ ಟಿಕೆಟ್ ಗಿಟ್ಟಿಸಲು ಪೈಪೋಟಿ ನಡೆಯುತ್ತಿದೆ. ಇಬ್ಬರೂ ಕ್ಷೇತ್ರದಲ್ಲಿ ಈಗಾಗಲೇ ಓಡಾಟ ನಡೆಸಿದ್ದಾರೆ.

ಇನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ವೈ.ಭರತ್‌ ಶೆಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎರಡು ಸುತ್ತುಗಳ ಪ್ರಚಾರ ಕಾರ್ಯವನ್ನೂ ಅವರು ಪೂರ್ಣಗೊಳಿಸಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಪಕ್ಷದ ಅಭ್ಯರ್ಥಿ ಯಾರು ಎಂಬುದನ್ನು ಅಂತಿಮಗೊಳಿಸದ ಕಾಂಗ್ರೆಸ್‌ ಹೈಕಮಾಂಡ್‌ನ ನಿಲುವು ಕಾರ್ಯಕರ್ತರನ್ನು ಗೊಂದಲಕ್ಕೆ ದೂಡಿದೆ. ಇವರಿಬ್ಬರಲ್ಲಿ ಒಬ್ಬರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎನ್ನುತ್ತವೆ ಪಕ್ಷದ ಮೂಲಗಳು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *