Connect with us

LATEST NEWS

ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ

ಮಂಗಳೂರು ಸೆಪ್ಟೆಂಬರ್ 28: ರೈತ ವಿರೋಧಿ ಮಸೂದೆ ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ದಕ್ಷಿಣಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಜನ ಜೀವನ ಎಂದಿನಂತೆ ಸಾಗಿದೆ.


ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 6 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳು ಮತ್ತು 50 ಹೋಂ ಗಾರ್ಡ್ ಗಳನ್ನು ನಿಯೋಜನೆ ಮಾಡಿದ್ದು, ಇಂದು ಬೆಳಗ್ಗಿನಿಂದಲೇ ಪೊಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿದ್ದಾರೆ.


ಇನ್ನು ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮದ ಕೈಗೊಳ್ಳಲಾಗುವುದು ಎಂದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *