LATEST NEWS
ರಾಜ್ಯಪಾಲರ ಆಗಮನ ಹಿನ್ನಲೆ ಅಕ್ಟೋಬರ್ 3 ಉಡುಪಿ ಜಿಲ್ಲಾ ಬಂದ್ ರದ್ದು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಅಕ್ಟೋಬರ್ 3: ಕಟ್ಟಡ ಸಾಮಾಗ್ರಿ ಸಾಗಾಟ ವಾಹನಗಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೂತನ ನಿಯಮ ಜಾರಿ ಮಾಡಿದ್ದನ್ನು ವಿರೋಧಿಸಿ ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿರುವುದನ್ನು ಹಿಂಪಡೆಯಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಪರವಾನಿಗೆ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿ ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿ ರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಅನಿರ್ಧಿಷ್ಠಾವಧಿ ಮುಷ್ಕರವು ಮುಂದು ವರೆದಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ನೂರಾರು ಸಂಖ್ಯೆಯಲ್ಲಿ ಲಾರಿಗಳು ರಾಷ್ಟ್ರೀಯ ಹೆದ್ದಾರಿ ಬಳಿ ಸರತಿ ಸಾಲಿನಲ್ಲಿ ನಿಲ್ಲಿಸಿದ್ದಾರೆ. ಈ ನಡುವೆ ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ 3ರಂದು ಉಡುಪಿ ಜಿಲ್ಲೆ ಬಂದ್ ಗೆ ಕರೆ ನೀಡಿದ್ದರು. ಆದರೆ ಜಿಲ್ಲೆಗೆ ರಾಜ್ಯಪಾಲರು ಆಗಮಿಸುವ ಹಿನ್ನೆಲೆಯಲ್ಲಿ ಮತ್ತು ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಉಡುಪಿ ಜಿಲ್ಲೆ ಬಂದ್ ನಿರ್ಧಾರವನ್ನು ಕೈಬಿಡಲಾಗಿದೆ. ಆದರೆ ನಮ್ಮಮುಷ್ಕರ ಹಾಗೂ ಹೋರಾಟ ಗಳು ಮುಂದುವರೆಯಲಿದೆ ಎಂದು ಒಕ್ಕೂಟದ ಪ್ರಮುಖ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.
You must be logged in to post a comment Login