Connect with us

    LATEST NEWS

    ಕೊರೊನಾ ಪ್ರಕರಣ ಏರಿಕೆಯಾದರೂ ಸಂಪೂರ್ಣ ಲಾಕ್ ಡೌನ್ ಮಾಡಲ್ಲ – ಸಚಿವ ಡಾ ಕೆ ಸುಧಾಕರ್

    ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಕೆಯಾದರೂ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ, ಇನ್ನೇನಿದ್ದರೂ ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ತಿಳಿಸಿದ್ದಾರೆ.


    ಎರಡು ವಾರಗಳ ಕಾಲ ಕೋವಿಡ್ ನಿರ್ಬಂಧ, ವೀಕೆಂಡ್ ಕರ್ಫ್ಯೂ ಎಂದು ಹೇರಿದ್ದ ಸರ್ಕಾರ ಇನ್ನು ಮುಂದೆ ಲಾಕ್ ಡೌನ್ ಮಾಡುತ್ತದೆಯೇ ಎಂಬ ಸಂಶಯ, ಗೊಂದಲ, ಭಯ-ಆತಂಕ ರಾಜ್ಯದ ಜನರಲ್ಲಿ ಮನೆಮಾಡಿತ್ತು. ಅದಕ್ಕೆ ಆರೋಗ್ಯ ಸಚಿವರೇ ಇಂದು ತೆರೆ ಎಳೆದಿದ್ದಾರೆ.

    ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಸಚಿವರು ಕೊರೋನಾ ಮೂರನೇ ಅಲೆಯ ಈ ಸಂದರ್ಭದಲ್ಲಿ ಜನರು ಸ್ವಆಸಕ್ತಿಯಿಂದ ಮುಂದೆ ಬಂದು ಕೋವಿಡ್ ಲಸಿಕೆಯ ಎರಡೂ ಡೋಸ್ ಹಾಕಿಸಿಕೊಳ್ಳಬೇಕು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply