Connect with us

KARNATAKA

ಓಮಿಕ್ರಾನ್ ಆತಂಕ ರಾಜ್ಯಾದ್ಯಂತ ಹೊಸ ವರ್ಷಾಚರಣೆಗೆ ಬ್ರೇಕ್ – ಕ್ರಿಸ್ಮಸ್ ನಿರಾಳ

ಬೆಂಗಳೂರು ಡಿಸೆಂಬರ್ 21: ಕೊರೊನಾ ರೂಪಾಂತರಿ ಓಮಿಕ್ರಾನ್ ಸಂಕಷ್ಟಕ್ಕೆ ಮತ್ತೆ ಈ ಬಾರಿ ಹೊಸ ವರ್ಷ ಬ್ರೇಕ್ ಬಿದ್ದಿದ್ದು, ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಬಗ್ಗೆ ಚರ್ಚೆ ನಡೆಸಲಾಯಿತು. ಅಲ್ಲದೆ ಕ್ರಿಸ್ ಮಸ್, ಹೊಸ ವರ್ಷ ಆಚರಣೆ ಬಗ್ಗೆಯೂ ಚರ್ಚಿಸಲಾಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಾಸ್ ಆಚರಣೆಗೆ ಅವಕಾಶವಿಲ್ಲ. ಕ್ರಿಸ್ ಮಸ್ ಗೆ ಯಾವುದೇ ನಿರ್ಬಂಧ ಇಲ್ಲ. ಎಂಜಿ ರೋಡ್ ಬ್ರಿಗೇಡ್ ರೋಡ್ ಗಳೆಲ್ಲ ಡಿಜೆ ಬ್ಯಾನ್ ಮಾಡಲಾಗುತ್ತದೆ ಎಂದರು.


ಒಟ್ಟಿನಲ್ಲಿ ಬಹಿರಂಗ ಹೊಸ ವರ್ಷ ಆಚರಣೆಗೆ ನಿಷೇಧ ಹೇರಲಾಗಿದೆ. ಡಿಸೆಂಬರ್ 30 ರಿಂದ ಜನವರಿ 2 ರವರೆಗಿನ ನಿರ್ಬಂಧ ರಾಜ್ಯಾದ್ಯಂತ ಅನ್ವಯವಾಗಲಿದೆ. ಪಬ್ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ 50% ಅವಕಾಶ ನೀಡಲಾಗುತ್ತಿದೆ. ಇನ್ನು ಸಿಬ್ಬಂದಿಗೆ ಡಬಲ್ ಡೋಸ್ ಲಸಿಕೆ ಹಾಕಿಸಿರಬೇಕು ಎಂದು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *