Connect with us

LATEST NEWS

ಯಾವ ರಾಜಕಾರಣಿ ರಾಜಕಾರಣದಿಂದ ನಿವೃತ್ತಿ ತೆಗೆದುಕೊಳ್ಳುವುದಿಲ್ಲ- ಜಮೀರ್ ಅಹಮ್ಮದ್

ಯಾವ ರಾಜಕಾರಣಿ ರಾಜಕಾರಣದಿಂದ ನಿವೃತ್ತಿ ತೆಗೆದುಕೊಳ್ಳುವುದಿಲ್ಲ- ಜಮೀರ್ ಅಹಮ್ಮದ್

ಮಂಗಳೂರು ಅಕ್ಟೋಬರ್ 18: ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದನ್ನು ಜನರು ಸ್ವೀಕರಿಸುವುದಿಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು, ಚುನಾವಣೆಗೆ ನಿಲ್ಲದಿದ್ದರೆ ಜನ ಬಿಡುವುದಿಲ್ಲ ಎಂದರು. ಯಾವ ರಾಜಕಾರಣಿಯೂ ರಾಜಕೀಯ ಜೀವನದಿಂದ ನಿವೃತ್ತಿಯಾಗುವುದಿಲ್ಲ ಎಂದು ಹೇಳಿದ ಅವರು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರು ಕೂಡ ಮುಂದೆ ನಿಲ್ಲುವುದಿಲ್ಲ ಎಂದು ಘೋಷಿಸಿದ್ದರು.

ಆದರೆ ಚುನಾವಣೆ ಬಂದ ನಂತರ ಮತ್ತೆ ಅದನ್ನು ಬದಲಾಯಿಸಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಲಿದ್ದಾರೆ. ಚುನಾವಣೆಗೆ ನಿಲ್ಲುವುದಿಲ್ಲ ಎಂದರೆ ಜನ ಬಿಡುವುದಿಲ್ಲ. ನಮಗೂ ಅವರು ಬೇಕೇ ಬೇಕು ಎಂದು ಜಮೀರ್​ ಅಹ್ಮದ್​ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *